ಗಡಿ ಆಯೋಗದ ನೂತನ ಅಧ್ಯಕ್ಷರಾಗಿ ನಿವೃತ್ತ ನ್ಯಾ. ಕೆ.ಎಲ್.ಮಂಜುನಾಥ್ ನೇಮಕ

ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ರಾಜ್ಯ ಗಡಿ ಆಯೋಗದ ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಜಸ್ಟೀಸ್ ಕೆ ಎಲ್ ಮಂಜುನಾಥ್
ಜಸ್ಟೀಸ್ ಕೆ ಎಲ್ ಮಂಜುನಾಥ್
Updated on
ಬೆಂಗಳೂರು: : ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್  ರಾಜ್ಯ ಗಡಿ ಆಯೋಗದ ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. 
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸಂಬಂಧ ಸಲಹೆ ನೀಡುವ ಸಲುವಾಗಿ ಸರ್ಕಾರ ಈ ಆಯೋಗವನ್ನು ರಚನೆಮಾಡಿದೆ. ಆಯೋಗದ ಹಿಂದಿನ ಅಧ್ಯಕ್ಷ  ಎಸ್‌. ರಾಜೇಂದ್ರ ಬಾಬು 2017ರ ನವೆಂಬರ್‌ನಲ್ಲಿ ರಾಜೀನಾಮೆ ಸಲ್ಲಿಸಿದ್ದರು. ಆ ಸ್ಥಾನಕ್ಕೆ ಮಂಜುನಾಥ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. 
ಇದೇ ವೇಳೆ ಸರ್ಕಾರವು ಉಪಲೋಕಾಯುಕ್ತ ಹುದ್ದೆಗೆ ಮಂಜುನಾಥ್ ಅವರ ಹೆಸರನ್ನು ಮಂಜೂರು ಮಾಡಿ ಮೂರು ಬಾರಿ ರಾಜ್ಯಪಾಲರಿಗೆ ಶಿಪಾರಸು ಕಳಿಸಿತ್ತು. ರಾಜ್ಯಪಾಲರು ಎಲ್ಲಾ ಬಾರಿಯೂ ಅವರ ಹೆಸರನ್ನು ತಿರಸ್ಕರಿಸಿದ್ದರು ಎನ್ನುವುದು ಗಮನಾರ್ಹ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com