ಈ ಬಗ್ಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆದಾಯ ತೆರಿಗೆಯ ಇಲಾಖೆ ಪ್ರಧಾನ ಆಯುಕ್ತ ರಜನೀಶ್ ಕುಮಾರ್ ಅವರು, ಕಾಂಗ್ರೆಸ್ ಮುಖಂಡ ಮನವಿಯನ್ನು ಉನ್ನತ ಅಧಿಕಾರಿಗಳಿಗೆ ರವಾನೆ ಮಾಡಲಾಗಿದೆ ಎಂದು ಹೇಳಿದರು. ಇದೇ ವೇಳೆ ಕಾಂಗ್ರೆಸ್ ಮುಖಂಡರ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆರೋಪ ಮಾಡುವವರ ಬಾಯಿ ಮುಚ್ಚಿಸಲು ಇಲಾಖೆ ಮುಂದಾಗುವುದಿಲ್ಲ. ಆದರೆ ಹಾಲಿ ನಡೆಯುತ್ತಿರುವ ಐಟಿ ದಾಳಿಯಲ್ಲಿ ಅವರಿಗೆ ಪಕ್ಷಪಾತ ಅಥವಾ ಒಂದು ಪಕ್ಷದ ಪರವಾಗಿ ನಡೆಯುತ್ತಿದೆ ಎಂದು ಅನಿಸಿದರೆ, ಉನ್ನತ ಅಧಿಕಾರಿಗಳಿಗೆ ದೂರು ನೀಡಬಹುದು. ಐಟಿ ಆಧಿಕಾರಿ ಬಾಲಕೃಷ್ಣ ಬಿಆರ್ ಅವರು ತಮ್ಮ ಕರ್ತವ್ಯ ನಿಭಾಯಿಸಿದ್ದು, ಇದರಲ್ಲಿ ಯಾವುದೇ ರೀತಿಯ ಷಡ್ಯಂತ್ರ ಕಂಡುಬಂದಿದೆ ಎಂದು ಯಾರಿಗಾದರೂ ಅನಿಸಿದರೆ ಕೋರ್ಟ್ ಮೆಟ್ಟಿಲೇರಬಹುದು. ಕೋರ್ಟ್ ನಲ್ಲಿ ರಿಟ್ ಅರ್ಜಿ ದಾಖಲಿಸುವ ಮೂಲಕ ದಾಳಿಯನ್ನು ಪ್ರಶ್ನಿಸಬಹುದು ಎಂದು ರಜನೀಶ್ ಕುಮಾರ್ ಹೇಳಿದರು.