ಬೆಂಗಳೂರು: ಮೇಲ್ಸೇತುವೆ ಮೇಲೆ ಭೀಕರ ಅಪಘಾತ- ಟೆಕ್ಕಿ ಸಾವು

ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಸಾಫ್ಟ್'ವೇರ್ ಕಂಪನಿಯ ಉದ್ಯೋಗಿಯೊಬ್ಬರು ಮೃತಪಟ್ಟಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಸಾಫ್ಟ್'ವೇರ್ ಕಂಪನಿಯ ಉದ್ಯೋಗಿಯೊಬ್ಬರು ಮೃತಪಟ್ಟಿದ್ದಾರೆ. 
ರಸ್ತೆ ವಿಭಜಕಕ್ಕೆ ಕಾರು ಗುದ್ದಿಸಿ ರಾಜೇಶ್ ಜಾಕೊಬ್ (33) ಎಂಬುವವರು ಮೃತಪಟ್ಟಿದ್ದಾರೆ. 

ಕೆಲಸ ಮುಗಿಸಿಕೊಂಡು ರಾಜೇಶ್ ಅವರು ಎಲೆಕ್ಟ್ರಾನಿಕ್ ಸಿಟಿ ಹತ್ತಿರದ ಮತ್ತೊಂದು ಸಾಫ್ಟ್'ವೇರ್ ಕಂಪನಿಯಲ್ಲಿ ಕೆಲಸದಲ್ಲಿರುವ ಪತ್ನಿಯನ್ನು ಮನೆಗೆ ಕರೆತರಲು ತೆರಳುವಾಗ ಅಪಘಾತ ಸಂಭವಿಸಿದೆ. 

ಮೇಲ್ಸೇತುವೆಯ ರಸ್ತೆ ವಿಭಜಕಕ್ಕೆ ಅವರ ಕಾರು ಡಿಕ್ಕಿಹೊಡೆದಿದ್ದು, ಕೂಡಲೇ ಗಾಯಾಳುವನ್ನು ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಆದರೆ, ರಾಜೇಶ್ ಅವರ ತೆಲೆಗ ತೀವ್ರವಾಗಿ ಪೆಟ್ಟಾಗಿದ್ದ ಕಾರಣ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. 

ಸಾವಿಗೀಡಾದ ರಾಜೇಶ್ ಅವರು ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿ ಆಗಿದ್ದು, ತಮ್ಮ ಕುಟುಂಬದ ಜೊತೆ ಬೀಳಕಹಳ್ಳಿಯಲ್ಲಿ ವಾಸವಾಗಿದ್ದರು. ಅವರ ಪತ್ನಿ ಸಹ ಎಲೆಕ್ಟ್ರಾನಿಕ್ ಸಿಟಿ ಸಾಪ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. 

ಪ್ರತಿನಿತ್ಯ ಕೆಲಸ ಮುಗಿಸಿ ರಾಜೇಶ್ ಅವರು, ತಮ್ಮ ಪತ್ನಿಯನ್ನು ಮನೆಗೆ ಪಿಕ್ ಅಪ್ ಮಾಡುತ್ತಿದ್ದರು. ಅದರೆ, ನಿನ್ನೆ ಸಂಜೆ ಕೂಡ ಪತ್ನಿ ಕಂಪನಿಗೆ ರಾಜೇಶ್ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com