ಮೂಲಗಳ ಪ್ರಕಾರ ಯುವತಿ ಅಪಹರಣದ ಕುರಿತು ಮಾಹಿತಿ ಲಭ್ಯವಾದ ಕೂಡಲೇ ಅಲರ್ಟ್ ಆದ ಪೊಲೀಸರು, ಅಪಹರಣಕಾರರ ಕುರಿತು ಮಾಹಿತಿ ಕಲೆಹಾಕಿ, ಆರೋಪಿಗಳನ್ನು ಬಂಧಿಸಲು ಹೋದಾಗ ಆರೋಪಿಗಳು ಅವರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಇನ್ಸ್ಪೆಕ್ಟರ್ ಸೈಮನ್ ಹಾಗೂ ಎಸ್ಐ ಸೋಮಶೇಖರ್ ನೇತೃತ್ವದ ತಂಡ ಕಾರ್ಯಾಚರಣೆಗೆ ಇಳಿದಿತ್ತು. ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ದುಷ್ಕರ್ಮಿಗಳು ಪೇದೆ ಮಹಾಂತೇಶ್ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾರೆ.