ಕಳೆದ ವರ್ಷದ ಬೇಸಿಗೆಯಲ್ಲಿ ಅತ್ಯಧಿಕ ತಾಪಮಾನ ದಾಖಲಾಗಿತ್ತು, ಕಳೆದ ವರ್ಷಕ್ಕೆ ಹೋಲಿಸಿದರೇ ಈ ಬೇಸಿಗೆಯಲ್ಲಿ ತಾಪಮಾನ ಕಡಿಮೆಯಾಗಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿತ್ತು. ಮುಂದಿನ ದಿನಗಳಲ್ಲಿ ಎಷ್ಟು ಪ್ರಮಾಣದ ತಾಪಮಾನ ಇರಲಿದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ, ಆದರೆ ಕಳೆದ ವರ್ಷಕ್ಕಿಂತ ಈ ವರ್ಷ ಬೆಂಗಳೂರು ಸ್ವಲ್ಪ ಮಟ್ಟಿಗೆ ತಂಪಾಗಿರಲಿದೆ, ಮಾರ್ಚ್ ತಿಂಗಳ ತಾಪಮಾನ ಅಧರಿಸಿ ಇದನ್ನು ಹೇಳಲಾಗುತ್ತಿದೆ ಎಂದು ಕರ್ನಾಟಕ ವಿಪತ್ತು ಪರಿಹಾರ ನಿರ್ವಹಣಾ ಕೇಂದ್ರದ ವಿಜ್ಞಾನಿ ಎಸ್ ಎಸ್ ಎಂ ಗವಾಸ್ಕರ್ ಹೇಳಿದ್ದಾರೆ.