ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ ಶ್ರೀಗಳಿಗೆ ಶುಭಾಶಯ ಕೋರಿದ್ದು, ಕಾಯಕ ಯೋಗಿ ಬಸವಣ್ಣನವರ ಸಮ ಸಮಾಜ, ದುರ್ಬಲರ ಸಬಲೀಕರಣ ಮುಂತಾದ ತತ್ವಗಳಿಗೆ ಸಂಪೂರ್ಣ ಬದ್ಧರಾಗಿ ಸಾಮಾಜಿಕ ಸೇವೆಯನ್ನೇ ಬದುಕನ್ನಾಗಿಸಿಕೊಂಡಿರುವ ಸಿದ್ದಗಂಗಾ ಮಠಾಧೀಶರಾದ ತ್ರಿವಿಧ ದಾಸೋಹಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರು 111ನೇ ಜನ್ಮದಿನೋತ್ಸವ ಆಚರಣೆ ಮಾಡಿಕೊಳ್ಳುತ್ತಿರುವುದು ಅತ್ಯಂತ ಸಂತಸ ನೀಡಿದೆ. ನಿಮ್ಮ ಸೇವೆ ಹೀಗೆ ನಿರಂತರ ಸಾಗಲಿ ಎಂದು ಟ್ವೀಟ್ ಮಾಡಿದ್ದಾರೆ.