ಕರ್ನಾಟಕ; ಯಶೋಮತಿ ಠಾಕೂರ್ ಕಾಂಗ್ರೆಸ್ ಸಹ ಉಸ್ತುವಾರಿ

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಮೇಲೆ ಹದ್ದಿನ ಕಣ್ಣಿಟ್ಟಿರುವ ಕಾಂಗ್ರೆಸ್ ಹೈ ಕಮಾಂಡ್ ಯಶೋಮತಿ ಠಾಕೂರ್ ಅವರನ್ನು ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಸಹ ಉಸ್ತುವಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಮೇಲೆ ಹದ್ದಿನ ಕಣ್ಣಿಟ್ಟಿರುವ ಕಾಂಗ್ರೆಸ್ ಹೈ ಕಮಾಂಡ್ ಯಶೋಮತಿ ಠಾಕೂರ್ ಅವರನ್ನು ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಸಹ ಉಸ್ತುವಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. 
ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ರಾಜ್ಯದಲ್ಲಿ ಚುನಾವಣಾ ಚಟುವಟಿಕೆ ಗರಿಗೆದರಿವೆ. ಹಾಲಿ ರಾಜ್ಯ ಉಸ್ತುವಾರಿಯಾಗಿರುವ ಕೆ.ಸಿ.ವೇಣುಗೋಪಾಲ್ ಹಾಗೂ ವಲಯ ಉಸ್ತುವಾರಿಗಳಾಗಿರುವ 4 ಮಂದಿ ಎಐಸಿಸಿ ಕಾರ್ಯದರ್ಶಿಗಳ ಮೇಲೆ ಚುನಾವಣೆಯ ಹೆಚ್ಚಿನ ಹೊರೆ ಬಿದ್ದಿದೆ. 
ಹೀಗಾಗಿ ಕೆಲಸದ ಒತ್ತಡ ಹೆಚ್ಚಾಗಲಿರುವ ಹಿನ್ನಲೆಯಲ್ಲಿ ಮಹಾರಾಷ್ಟ್ರ ಮೂಲದ ಕಾಂಗ್ರೆಸ್ ಶಾಸಕಿ ಯಶೋಮತಿ ಠಾಕೂರ್ ಅವರನ್ನು ಎಐಸಿಸಿ ಕಾರ್ಯದರ್ಶಿಯನ್ನಾಗಿ ಹಾಗೂ ಕರ್ನಾಟಕ ರಾಜ್ಯದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಆದೇಶಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com