ಬಿಬಿಎಂಪಿ ಆಯುಕ್ತರಾಗಿದ್ದ ಹಿರಿಯ ಐಎಎಸ್ ಅದಿಕಾರಿ ಎನ್. ಮಂಜುನಾಥ್ ಸೇರಿ ವಿವಿಧ ಜಿಲ್ಲಾಧಿಕಾರಿಗಳ ವಿರುದ್ಧ ಚುನಾವಣಾ ನಿಯಮಗಳನ್ನು ಪಾಲಿಸದಿರುವ ಬಗ್ಗೆ ಮತ್ತು ಚುನಾವಣಾ ವಿಚಾರಗಳಲ್ಲಿ ಪಕ್ಷಪಾತ ಅನುಸರಿಸುತ್ತಿದ್ದು, ಹೋಲ್ಡಿಂಗ್ಸ್ ಗಳನ್ನು ಹಾಕಲು ಅನುಮತಿ ಕೋರಿದರೂ ಅನುಮತಿ ನೀಡಿಲ್ಲ ಎಂದು ಆರೋಪಿಸಿ ಮೇ.2 ರಂದು ಬಿಜೆಪಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಈ ಹಿನ್ನಲೆಯಲ್ಲಿ ಮಂಜುನಾಥ ಪ್ರಸಾದ್ ಅವರ ವರ್ಗಾವಣೆ ನಡೆದಿದೆ ಎಂದು ಹೇಳಲಾಗುತ್ತಿದೆ.