ಚಾಮರಾಜನಗರ: ಬೈಕ್ ಗೆ ಪೋಲೀಸ್ ಜೀಪ್ ಡಿಕ್ಕಿ, ಯುವಕ ಸಾವು

ಬೈಕ್ ಗೆ ಪೋಲೀಸ್ ಜೀಪ್ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸಲ್ದೆ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಬಸವಟ್ಟಿ ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ: ಬೈಕ್ ಗೆ ಪೋಲೀಸ್ ಜೀಪ್ ಡಿಕ್ಕಿ, ಯುವಕ ಸಾವು
ಚಾಮರಾಜನಗರ: ಬೈಕ್ ಗೆ ಪೋಲೀಸ್ ಜೀಪ್ ಡಿಕ್ಕಿ, ಯುವಕ ಸಾವು
ಚಾಮರಾಜನಗರ: ಬೈಕ್ ಗೆ ಪೋಲೀಸ್ ಜೀಪ್ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಬಸವಟ್ಟಿ ಗ್ರಾಮದಲ್ಲಿ ನಡೆದಿದೆ.
ಸಂತೇಮರಹಳ್ಳಿ ಮೈಸೂರು ರಸ್ತೆಯ ಬಸವಟ್ಟಿ ಗೇಟ್ ಸಮೀಪ ಬೈಕ್ ನಲ್ಲಿ ಬರುತ್ತಿದ್ದ ಶಂಭುಲಿಂಗಪ್ಪ (ಚಿಕ್ಕಣ್ಣ) ಅವರ ವಾಹನಕ್ಕೆ ಡಿವೈಎಸ್​ಪಿ ಜಯಕುಮಾರ್ ಪ್ರಯಾಣಿಸುತ್ತಿದ್ದ ಪೊಲೀಸ್ ಜೀಪ್ ಡಿಕ್ಕಿಯಾಗಿದೆ. 
ಶುಕ್ರವಾರ ನಡೆದ ಘಟನೆಯಲ್ಲಿ ಶಂಭುಲಿಂಗಪ್ಪ ಅವರ ತಲೆಗೆ ಗಂಭೀರ ಗಾಯಗಲಾಗಿದ್ದವು. ಸ್ಥಳೀಯರೆಲ್ಲ ಸೇರಿ ತಕ್ಷಣ ಅವರನ್ನು ಮೈಸೂರಿನ ಜೆಎಸ್‌ಎಸ್‌  ಆಸ್ಪತ್ರೆಗೆ ಸಾಖಲಿಸಿದರು. ಆದರೆ ಚಿಕಿತ್ಸೆ ಫಲ ನೀಡದ ಕಾರಣ ಅವರು ಮೃತಪಟ್ಟಿದ್ದಾನೆ
ಘಟನೆ  ವೇಳೆ ಪೋಲೀಸ್ ಜೀಪ್ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಹೊಲಕ್ಕೆ ನುಗ್ಗಿತ್ತು. ಆದರೆ ಅಪಘಾತಕ್ಕೆ ಕಾರಣವಾದ ಪೋಲೀಸ್ ಜೀಪಿನಲ್ಲಿದ್ದ ಹಿರಿಯ ಅಧಿಕಾರಿ ಸೇರಿದಂತೆ ನಾಲ್ಕೈದು ಪೊಲೀಸ್‌ ಸಿಬ್ಬಂದಿ ತಕ್ಷಣ ವಾಹನದಿಂದಿಳಿದರಲ್ಲದೆ ರಸ್ತೆಗೆ ಓಡಿ ಬಸ್ ಹತ್ತಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.
ಇದಕ್ಕೆ ಮುನ್ನ ಪೋಲೀಸರ ವಿರುದ್ಧ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಆಗ ಪರಿಸ್ಥಿತಿ ತಿಳಿಗೊಳಿಸುವುದಕ್ಕಾಗಿ ಪೋಲೀಅರು ಲಘು ಲಾಠಿ ಪ್ರಹಾರ ನಡೆಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com