ಪ್ರಸಕ್ತ ಸಾಲಿವ ಪಾಸು ವಿತರಣೆಯಾಗುವವರೆಗೂ ದ್ವಿತೀಯ ಪಿಯು ವಿದ್ಯಾರ್ಥಿಗಳು ಈಗಿರುವ ಬಸ್ ಪಾಸ್ ಗಳ ಮೂಲಕವೇ ಉಚಿತವಾಗಿ ಪ್ರಯಾಣಿಸಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೆಎಸ್ ಆರ್ ಟಿಸಿ ಅವಕಾಶ ಕಲ್ಪಿಸಿದೆ. ಒಂದು ತಿಂಗಳ ಮುಂಚಿತವಾಗಿ ಅಂದರೆ ಮೇ 2 ರಿಂದಲೇ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯು ತರಗತಿಗಳನ್ನು ಪ್ರಾರಂಭಿಸಿದ್ದು, ಇದರಿಂದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಲಿದೆ.