ಹಾಲಿ ಕರ್ನಾಟಕ ವಿಧಾನ ಸಭೆ ಚುನಾವಣೆ ಕೇವಲ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ನಡುವಿನ ಜಿದ್ದಾಜಿದ್ದಿಯಾಗಿ ಉಳಿದಿಲ್ಲ. ಬದಲಿಗೆ ಅಭ್ಯರ್ಥಿಗಳ ಬೆಂಬಲಿಗರು, ಕಾರ್ಯಕರ್ತರು.. ಅಷ್ಟೇ ಏಕೆ ಮತದಾರರ ನಡುವಿನ ಜಿದ್ದಾಜಿದ್ದಿಯಾಗಿ ಮಾರ್ಪಟ್ಟಿದೆ. ಹಲವು ಕ್ಷೇತ್ರಗಳಲ್ಲಿ ವಿರೋಧಿ ಬಣದ ಅಭ್ಯರ್ಥಿ ಸೋಲಲಿ ಎಂದು ಕಾರ್ಯಕರ್ತರು, ಬೆಂಬಲಿಗರು ದೇವರಲ್ಲಿ ಹರಕೆ ಹೊತ್ತಿದ್ದರೆ, ಮತ್ತೆ ಕೆಲವು ಕ್ಷೇತ್ರಗಳಲ್ಲಿ ತಮ್ಮ ಕ್ಷೇತ್ರ ಶಾಸಕರ ವಿರುದ್ಧವೇ ಮತದಾರರು ದೇವರಲ್ಲಿ ಹರಕೆ ಹೊತ್ತಿದ್ದಾರೆ.