ಸೋಮವಾರ ಬಾದಾಮಿಯಲ್ಲಿರುವ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು, ನಿನ್ನೆ ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಆಪ್ತರೆಂದು ಹೇಳಲಾಗುತ್ತಿರುವ ದಾವಣಗೆರೆಯ ಚನ್ನಗಿರಿ ಮಾಜಿ ಶಾಸಕ, ಹಾಲಿ ಬಿಜೆಪಿ ಅಭ್ಯರ್ಥಿ ಮಾಡಾಳ್ ವಿರೂಪಾಕ್ಷಪ್ಪ ಮನೆ ಮೇಲೂ ದಾಳಿ ನಡೆಸಿ ದಾಖಲೆಗಳ ಪರಿಶೀಲಿಸಿದ್ದಾರೆ.