ಮಂಗಳೂರು: ಸಚಿವ ರಮಾನಾಥ್ ರೈ ಆಪ್ತನ ಮನೆ ಮೇಲೆ ಐಟಿ ದಾಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ತಂಗಿದ್ದ ಬಾದಾಮಿಯ ರೆಸಾರ್ಟ್ ನಂತರ ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ....
ರಮಾನಾಥ್ ರೈ
ರಮಾನಾಥ್ ರೈ
Updated on
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಂಗಿದ್ದ ಬಾದಾಮಿಯ ರೆಸಾರ್ಟ್ ನಂತರ ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಮತ್ತಷ್ಟು ಚುರುಕುಗೊಂಡಿದ್ದು, ಮಂಗಳವಾರ ಸಂಜೆ ಸಚಿವ ರಮಾನಾಥ್ ರೈ ಅವರ ಆಪ್ತರಾಗಿದ್ದ ಇಬ್ಬರು ಉದ್ಯಮಿಗಳ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದೆ.
ಮಾರ್ಗೋಡಿ ಕನ್ಸ್ ಟ್ರಕ್ಸನ್ಸ್ ನ ಸಂಜೀವ್ ಪೂಜಾರಿ ಮತ್ತು ಬಿರ್ವ ಸೆಂಟರ್ ನ ಸುಧಾಕರ್ ಶೆಟ್ಟಿ ಅವರ ನಿವಾಸ ಮತ್ತು ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ಆರೋಪಿಸಿದ್ದು, ಈ ದಾಳಿ ಬಿಜೆಪಿಯ ಸೋಲಿನ ಹತಾಶೆಯನ್ನು ತೋರಿಸುತ್ತದೆ ಎಂದು ರಮಾನಾಥ್ ರೈ ಹೇಳಿದ್ದಾರೆ.
ಸೋಮವಾರ ಬಾದಾಮಿಯಲ್ಲಿರುವ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು, ನಿನ್ನೆ ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಆಪ್ತರೆಂದು ಹೇಳಲಾಗುತ್ತಿರುವ ದಾವಣಗೆರೆಯ ಚನ್ನಗಿರಿ ಮಾಜಿ ಶಾಸಕ,‌ ಹಾಲಿ ಬಿಜೆಪಿ ಅಭ್ಯರ್ಥಿ ಮಾಡಾಳ್ ವಿರೂಪಾಕ್ಷಪ್ಪ ಮನೆ ಮೇಲೂ ದಾಳಿ ನಡೆಸಿ ದಾಖಲೆಗಳ ಪರಿಶೀಲಿಸಿದ್ದಾರೆ.
ಇನ್ನು ಬಿಜೆಪಿ ಅಭ್ಯರ್ಥಿ ಮನೆ ಮೇಲೂ ಐಟಿ ದಾಳಿಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಅಚ್ಚರಿ ತಂದಿದ್ದರೂ ಇದು ಕಣ್ಣೊರೆಸುವ ತಂತ್ರ ಎಂದು ಕಿಡಿಕಾರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com