ಹುಬ್ಬಳ್ಳಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ಗ್ರಾಮೀಣಾಭಿವೃದ್ಧಿ ಸಚಿವ ಎಚ್ ಕೆ ಪಾಟೀಲ್ ಅವರ ಆಪ್ತ ಹಾಗೂ ಕಾಂಗ್ರೆಸ್ ಮುಖಂಡ ಗುರಣ್ಣ ಬಳಗಾನೂರ್ ಮತ್ತು ರಂಗನಗೌಡ ಓದುಗೌಡರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.
ಕಳಸಾಪುರ ರಸ್ತೆಯಲ್ಲಿರುವ ಬಳಗಾನೂರ್ ಅವರ ನಿವಾಸ ಮತ್ತು ಕೇಶವನಗರದಲ್ಲಿರುವ ಓದುಗೌಡರ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಮಹತ್ವದ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಐಟಿ ಅಧಿಕಾರಿಗಳಿಗೆ ಅಬಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಸಾಥ್ ನೀಡಿದ್ದಾರೆ.
ಈ ಇಬ್ಬರು ನಾಯಕರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದರು. ಆದರೆ ವಿಚಾರಣೆಗೆ ಹಾಜರಾಗದೆ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಬಳಗಾನೂರ್ ಮತ್ತು ಓದುಗೌಡರ್ ಅವರಿಗೆ ಇಂದು ಶಾಕ್ ನೀಡಿದ್ದಾರೆ.
ಗುರಣ್ಣ ಬಳಗಾನೂರು ಸಚಿವ ಎಚ್ ಕೆ ಪಾಟೀಲ್ ಆಪ್ತ ಹಾಗೂ ಗದಗ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು.