ಚಾರ್ಜ್ಶೀಟ್ನೊಂದಿಗೆ ಕೆಲ ವೈದ್ಯಕೀಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಲಗತ್ತಿಸಲಾಗಿದೆ ಎನ್ನಲಾಗಿದ್ದು, ಹಲ್ಲೆ ಪ್ರಕರಣದ ಆರೋಪಿಗಳಾದ ನಲಪಾಡ್, ಅರುಣ್ ಬಾಬು, ಶ್ರೀಕೃಷ್ಣ, ಮಂಜುನಾಥ್, ಅಶ್ರಫ್, ಬಾಲಕೃಷ್ಣ, ಅಭಿಷೇಕ್ ಹಾಗೂ ನಾಸಿರ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಮತ್ತೊಬ್ಬ ಆರೋಪಿ ಕೃಷ್ಣ ಇನ್ನೂ ನಾಪತ್ತೆಯಾಗಿದ್ದು, ಆತ 2014ರಿಂದಲೂ ಮೊಬೈಲ್ ಬಳಸುತ್ತಿಲ್ಲ. ವಿದೇಶದಲ್ಲಿ ಅಡಗಿರಬಹುದು, ಹುಡುಕಾಟ ನಡೆಸುತ್ತಿದ್ದೇವೆ ಎಂದು ವರದಿಯಲ್ಲಿ ಸಿಸಿಬಿ ಅಧಿಕಾರಿಗಳು ಉಲ್ಲೇಖ ಮಾಡಿದ್ದಾರೆ.