ಪ್ರಕರಣ ಸಂಬಂಧ ರಾಜ್ಯ ಚುನಾವಣಾ ಉಪ ಆಯುಕ್ತ ಮಹೇಶ್ವರ ರಾವ್ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿತ್ತು. ಅದರಂತೆ ನಿನ್ನೆಯವರೆಗೂ ನಡೆದ ತನಿಖಾ ವರದಿಯನ್ನು ಕೇಂದ್ರ ಆಯೋಗಕ್ಕೆ ರವಾನೆ ಮಾಡಲಾಗಿದ್ದು, ಮೇಲ್ನೋಟಕ್ಕೆ ಕಂಡು ಬಂದ ಅಂಶಗಳ ಉಲ್ಲೇಖಿಸಿ ಸಿದ್ಧಪಡಿಸಲಾದ ವರದಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ. ದೆಹಲಿಗೂ ಅಪಾರ್ಟ್ ಮೆಂಟ್ ನಲ್ಲಿ ಸಿಕ್ಕ ವೋಟರ್ ಐಡಿ ಸ್ಯಾಂಪಲ್ ರವಾನೆ ಮಾಡಲಾಗಿದ್ದು, ಆಯೋಗದ ವರದಿಯಲ್ಲಿ ಶಾಸಕ ಮುನಿರತ್ನ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕುರಿತು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ ಎಂದು ತಿಳಿದುಬಂದಿದೆ.