ಮುನಿರತ್ನ
ಮುನಿರತ್ನ

ರಾಜರಾಜೇಶ್ವರಿನಗರ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನಗೆ ಜಾಮೀನು ಮಂಜೂರು!

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಶಿ ರಾಶಿ ವೋಟರ್​ಐಡಿ ಪತ್ತೆ ಹಾಗೂ ಮತದಾರರಿಗೆ ಹಣ ಆಮಿಷ ಒಡ್ಡಿದ್ದ ಪ್ರಕರಣಗಳಿಗೆ ಸಂಬಂಧಿಸಿ ಆರೋಪಿ ಪಟ್ಟಿಯಲ್ಲಿರುವ ಕಾಂಗ್ರೆಸ್​ ಅಭ್ಯರ್ಥಿ...
Published on
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಶಿ ರಾಶಿ ವೋಟರ್​ಐಡಿ ಪತ್ತೆ ಹಾಗೂ ಮತದಾರರಿಗೆ ಹಣದ ಆಮಿಷ ಒಡ್ಡಿದ್ದ ಪ್ರಕರಣಗಳಿಗೆ ಸಂಬಂಧಿಸಿ ಆರೋಪಿ ಪಟ್ಟಿಯಲ್ಲಿರುವ ಕಾಂಗ್ರೆಸ್​ ಅಭ್ಯರ್ಥಿ ಮುನಿರತ್ನಗೆ ಜಾಮೀನು ಮಂಜೂರಾಗಿದೆ. 
ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಮುನಿರತ್ನ ಅವರು ಇಂದು ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರಾಗಿದ್ದು ಎರಡೂ ಪ್ರಕರಣಗಳಲ್ಲೂ ಅವರಿಗೆ ಕೋರ್ಟ್ ಜಾಮೀನು ನೀಡಿದೆ. 
ಮುನಿರತ್ನ ಸೇರಿ ಎಲ್ಲ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 420, 468, 471ರಡಿ ಪ್ರಕರಣ ದಾಖಲಿಸುವಂತೆ ನಗರದ  24ನೇ ಎಸಿಎಂಎಂ ಕೋರ್ಟ್ ನಲ್ಲಿ ಜಾಲಹಳ್ಳಿ ಪೊಲೀಸರಿಗೆ​ ಆದೇಶಿಸಿತ್ತು.
ಗುರುತಿನ ಚೀಟಿಯನ್ನು ರೇಡ್ ಮಾಡಲು ಹೋಗಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಲಾಗಿತ್ತು. ರಾಕೇಶ್ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com