ರಾಜಕೀಯ ವೈಷಮ್ಯ: ಬೆಂಗಳೂರಿನಲ್ಲಿ ಮಾಜಿ ಕಾರ್ಪೋರೇಟರ್ ಮೇಲೆ ಹಲ್ಲೆ

ರಾಜಕೀಯ ವೈಷಮ್ಯದ ಹಿನ್ನಲೆಯಲ್ಲಿ ಮಾಜಿ ಕಾರ್ಪೋರೇಟರ್ ಹಾಗೂ ಬಿಜೆಪಿ ಮುಖಂಡ ವೇದವ್ಯಾಸ್ ಭಟ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.
ಮಾಜಿ ಕಾರ್ಪೋರೇಟರ್ ವೇದವ್ಯಾಸ ಭಟ್
ಮಾಜಿ ಕಾರ್ಪೋರೇಟರ್ ವೇದವ್ಯಾಸ ಭಟ್
ಬೆಂಗಳೂರು: ರಾಜಕೀಯ ವೈಷಮ್ಯದ ಹಿನ್ನಲೆಯಲ್ಲಿ ಮಾಜಿ ಕಾರ್ಪೋರೇಟರ್ ಹಾಗೂ ಬಿಜೆಪಿ ಮುಖಂಡ ವೇದವ್ಯಾಸ್ ಭಟ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.
ಬೆಂಗಳೂರಿನ ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಎಂಎಚ್ ಬಳಿ ಈ ಘಟನೆ ನಡೆದಿದ್ದು, ವೇದವ್ಯಾಸ್ ಭಟ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಮೂಲಗಳ ಪ್ರಕಾರ ಇಂದು ಬೆಳಗ್ಗೆ ವೇದವ್ಯಾಸ್ ಭಟ್ ಅವರು ವಾಕಿಂಗ್ ಹೋಗಿದ್ದ ಸಮಯದಲ್ಲಿ ಎರಡು ಬೈಕ್ ಗಳಲ್ಲಿ ನಾಲ್ವರು ದುಷ್ಕರ್ಮಿಗಳು ಬಂದಿದ್ದು, ಈ ವೇಳೆ ನೋಡ ನೋಡುತ್ತಿದ್ದಂತೆಯೇ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ವೇದವ್ಯಾಸ್ ಭಟ್ ಮುಖಕ್ಕೆ ಹಲ್ಲೆ ನಡೆಸಿ ನಂತರ ಬೈಕಿನಲ್ಲಿ ಪರಾರಿಯಾಗಿದ್ದಾರೆ.
ರಕ್ತದ ಮಡುವಿನಲ್ಲಿದ್ದ ಮಾಜಿ ಕಾರ್ಪೋರೇಟರ್ ವೇದವ್ಯಾಸ್ ಭಟ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ಘಟನೆ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ವೇದವ್ಯಾಸ್ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.
ದೂರಿನಲ್ಲಿ ನಾಲ್ವರು ದುಷ್ಕರ್ಮಿಗಳು ಕೈಗಳಿಂದಲೇ ಹಲ್ಲೆ ನಡೆಸಿದ್ದು, ಹಲ್ಲೆ ಮಾಡುವಾಗ ರಾಜಕೀಯ ಮಾಡುತ್ತೀಯಾ? ನಿನಗೆ ರಾಜಕೀಯ ಬೇಕಾ? ಅಂತ ಹೇಳಿ ಹಲ್ಲೆ ನಡೆಸಿದ್ದಾರೆ ಎಂದು ವೇದವ್ಯಾಸ್ ಭಟ್ ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅಲ್ಲದೆ ಘಟನೆ ಸಂಬಂಧ ಸ್ಥಳೀಯರನ್ನು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ವೇದವ್ಯಾಸ್ ಭಟ್ ಈ ಹಿಂದೆ ಮಾವಳ್ಳಿ ಕ್ಷೇತ್ರ ಕಾರ್ಪೋರೇಟರ್ ಆಗಿದ್ದರು. ಮತದಾನದ ದಿನವೇ ಮಾವಳ್ಳಿಯ ಮತಗಟ್ಟೆಯೊಂದರಲ್ಲಿ ಕೆಲ ದುಷ್ಕರ್ಮಿಗಳು ವೇದವ್ಯಾಸ್ ಭಟ್ ಅವರೊಂದಿಗೆ ವಾಗ್ವಾದ ನಡೆಸಿದ್ದರು ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com