ಸುಪ್ರೀಂ ಆದೇಶ ಕುದುರೆ ವ್ಯಾಪಾರ ತಡೆಯಲು ಸಹಾಯಕವಾಗಲಿದೆ: ಸಂತೋಷ್‌ ಹೆಗ್ಡೆ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಶನಿವಾರ ಸಂಜೆ 4 ಗಂಟೆಗೆ ವಿಶ್ವಾಸಮತ ಸಾಬೀತುಪಡಿಸುವಂತೆ ಸುಪ್ರೀಂ ಕೊರ್ಟ್‌....
ಸಂತೋಷ್ ಹೆಗ್ಡೆ
ಸಂತೋಷ್ ಹೆಗ್ಡೆ
Updated on
ಮೈಸೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಶನಿವಾರ ಸಂಜೆ 4 ಗಂಟೆಗೆ ವಿಶ್ವಾಸಮತ ಸಾಬೀತುಪಡಿಸುವಂತೆ ಸುಪ್ರೀಂ ಕೊರ್ಟ್‌ ಶುಕ್ರವಾರ ನೀಡಿರುವ ಆದೇಶ ಸ್ವಾಗತಾರ್ಹ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಅವರು ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಸಂತೋಷ್ ಹೆಗ್ಡೆ ಅವರು, ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಚನೆಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದು ಸರಿಯಾದ ನಿರ್ಧಾರ. ಆದರೆ ಬಹುಮತ ಸಾಬೀತುಪಡಿಸಲು 15 ದಿನಗಳ ಕಾಲಾವಕಾಶ ಕೊಟ್ಟಿದ್ದು ಖಂಡನೀಯ ಎಂದರು.
ರಾಜ್ಯಪಾಲ ವಜುಭಾಯಿ ವಾಲಾ ಅವರು ಮಾಡಿದ ತಪ್ಪನ್ನು ಸುಪ್ರೀಂ ಕೋರ್ಟ್‌ ಸರಿಪಡಿಸಿದೆ ಮತ್ತು ಸುಪ್ರೀಂ ಕೋರ್ಟ್ ನ ಈ ಆದೇಶದಿಂದ ಶಾಸಕರ ಕುದುರೆ ವ್ಯಾಪಾರವನ್ನು ತಡೆಯಲು ಸಹಾಯಕವಾಗಲಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com