ಅಲ್ಲದೆ ಪ್ರಸ್ತುತ ಸ್ಪೀಕರ್ ಕೆಜಿ ಬೋಪಯ್ಯ ಅವರ ಆಯ್ಕೆಯನ್ನು ತಡೆ ಹಿಡಿಯಬೇಕಾದರೆ, ಅವರಿಗೆ ನೋಟಿಸ್ ನೀಡಬೇಕಾಗುತ್ತದೆ. ಒಂದು ವೇಳೆ ಹಾಗಾದರೆ ವಿಶ್ವಾಸಮತ ಯಾಚನೆಯನ್ನು ಮುಂದೂಡಬೇಕಾಗುತ್ತದೆ. ಆದರೆ ವಿಶ್ವಾಸ ಮತ ಇಂದೇ ನಡೆಯಬೇಕು. ಒಂದು ವೇಳೆ ನಾವು ರಾಜ್ಯಪಾಲರ ಆದೇಶವನ್ನು ಪರಿಶೀಲನೆ ಮಾಡಿದರೆ ನಿನ್ನೆ ನಾವು ನೀಡಿದ್ದ ಆದೇಶದ ವಿರುದ್ಧವಾಗುತ್ತದೆ. ಅಲ್ಲದೆ ಅವರ ವಾದವನ್ನೂ ಕೂಡ ಆಲಿಸಬೇಕು. ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಈಗ ನೀವೇ ಹೇಳಿ ಕೆಜಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಮಾಡಿರುವ ನಿರ್ಧಾರವನ್ನು ವಾಪಸ್ ಪಡೆಯುವಂತೆ ನಾವು ರಾಜ್ಯಪಾಲರಿಗೆ ನಿರ್ದೇಶನ ನೀಡಬೇಕೆ?, ಆದರೆ ಆ ಬಳಿಕ ವಿಶ್ವಾಸಮತ ಯಾಚನೆ ಕಲಾಪ ನಡೆಸೋರು ಯಾರು.. ನಿಮ್ಮ ವಾದದಲ್ಲೇ ಗೊಂದಲವಿದೆ ಎಂದು ನ್ಯಾಯಮೂರ್ತಿ ಬೋಬಡೆ ಅಭಿಪ್ರಾಯಪಟ್ಟರು.