ಕಾಂಗ್ರೆಸ್-ಜೆಡಿಎಸ್ ಅರ್ಜಿ ವಜಾ, ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಮುಂದುವರಿಕೆ; ನೇರ ಪ್ರಸಾರಕ್ಕೆ 'ಸುಪ್ರೀಂ' ಆದೇಶ

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಶ್ವಾಸ ಮತ ಯಾಚನೆ ಸಂಬಂಧ, ಕೆಜಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಸುಪ್ರೀಂ ಕೋರ್ಟ್ ಮುಂದುವರೆಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಶ್ವಾಸ ಮತ ಯಾಚನೆ ಸಂಬಂಧ, ಕೆಜಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಸುಪ್ರೀಂ ಕೋರ್ಟ್ ಮುಂದುವರೆಸಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಕೆ.ಜಿ ಬೋಪಯ್ಯ ಅವರು ಹಂಗಾಮಿ ಸ್ಪೀಕರ್​ ಆಗಿ ಮುಂದುವರೆಯಲಿದ್ದಾರೆ. ಹೀಗಾಗಿ ಇಂದಿನ ಬಹುಮತ ಸಾಬೀತು ಪ್ರಕ್ರಿಯೆ ಕೆಜಿ ಬೋಪಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ. 
ಅಂತೆಯೇ ಇಂದಿನ ಬಹುಮತ ಸಾಬೀತು ಪ್ರಕ್ರಿಯೆಯನ್ನು ಎಲ್ಲ ಚಾನೆಲ್​ಗಳಲ್ಲಿ ನೇರಪ್ರಸಾರ ಮಾಡಲು ಸೂಚಿಸಿದ್ದು,  ಪಾರದರ್ಶಕತೆ ಕಾಯ್ದುಕೊಳ್ಳಲು ನೇರ ಪ್ರಸಾರವೊಂದೇ ಪರಿಹಾರ ಎಂದೂ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com