ಕಾಂಗ್ರೆಸ್-ಜೆಡಿಎಸ್ ಅರ್ಜಿ ವಜಾ, ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಮುಂದುವರಿಕೆ; ನೇರ ಪ್ರಸಾರಕ್ಕೆ 'ಸುಪ್ರೀಂ' ಆದೇಶ

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಶ್ವಾಸ ಮತ ಯಾಚನೆ ಸಂಬಂಧ, ಕೆಜಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಸುಪ್ರೀಂ ಕೋರ್ಟ್ ಮುಂದುವರೆಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಶ್ವಾಸ ಮತ ಯಾಚನೆ ಸಂಬಂಧ, ಕೆಜಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಸುಪ್ರೀಂ ಕೋರ್ಟ್ ಮುಂದುವರೆಸಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಕೆ.ಜಿ ಬೋಪಯ್ಯ ಅವರು ಹಂಗಾಮಿ ಸ್ಪೀಕರ್​ ಆಗಿ ಮುಂದುವರೆಯಲಿದ್ದಾರೆ. ಹೀಗಾಗಿ ಇಂದಿನ ಬಹುಮತ ಸಾಬೀತು ಪ್ರಕ್ರಿಯೆ ಕೆಜಿ ಬೋಪಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ. 
ಅಂತೆಯೇ ಇಂದಿನ ಬಹುಮತ ಸಾಬೀತು ಪ್ರಕ್ರಿಯೆಯನ್ನು ಎಲ್ಲ ಚಾನೆಲ್​ಗಳಲ್ಲಿ ನೇರಪ್ರಸಾರ ಮಾಡಲು ಸೂಚಿಸಿದ್ದು,  ಪಾರದರ್ಶಕತೆ ಕಾಯ್ದುಕೊಳ್ಳಲು ನೇರ ಪ್ರಸಾರವೊಂದೇ ಪರಿಹಾರ ಎಂದೂ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com