ಇನ್ನು ಈ ಹಿಂದೆ ಗೋವಾ, ಬಿಹಾರ ರಾಜ್ಯಗಳಲ್ಲಿ ರಾಜ್ಯಪಾಲರು ಅತಿ ದೊಡ್ಡ ಪಕ್ಷಗಳನ್ನು ಹೊರತು ಪಡಿಸಿ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಮನ್ನಣೆ ನೀಡಿ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು. ಆದರೆ ಕರ್ನಾಟಕ ರಾಜ್ಯಪಾಲರಾದ ವಜುಬಾಯ್ ವಾಲಾ ಅವರು ಬಿಜೆಪಿ ಏಕೈಕ ದೊಡ್ಡ ಪಕ್ಷ ಎಂಬ ಒಂದೇ ಕಾರಣಕ್ಕೆ ಮನ್ನಣೆ ನೀಡಿ, ಬಿಎಸ್ ವೈ ಅವರನ್ನು ಸರ್ಕಾರ ರಚನೆಗೆ ಆಹ್ವಾನ ಮಾಡಿದ್ದರು. ಇದು ಆ ರಾಜ್ಯಗಳ ಏಕೈಕ ದೊಡ್ಡ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿ ಇದೀಗ ಆ ಪಕ್ಷಗಳೂ ಕೂಡ ಏಕೈಕ ದೊಡ್ಡ ಪಕ್ಷದ ಆಧಾರದ ಮೇಲೆ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಕೆ ಮಾಡಿವೆ.