ನಾಲ್ಕು ಜನ ದುಷ್ಕರ್ಮಿಗಳ ತಂಡದಲ್ಲಿ ಚಿತ್ರ ನಿರ್ದೇಶಕನೊಬ್ಬ ಕೂಡ ಇದ್ದು, ಕೆಂಗೇರಿಯ ಸಿನಿಮಾ ನಿರ್ದೇಶಕ ಸಂತೋಷ್ ಕುಮಾರ್ ಅಲಿಯಾಸ್ ವಿಜಯ ಸಂತೋಷ್ (27), ಈತನ ಕಾರು ಚಾಲಕ ಪ್ರಶಾಂತ್ (26), ಸುರೇಶ್ (24) ಮತ್ತು ಪ್ರದೀಪ್ (22) ಎಂಬುವವರನ್ನು ಬೆಂಗಳೂರು ಸಿಸಿಬಿ ಪೊಲೀಸರ ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಕೆಂಗೇರಿ ಉಪನಗರದ ರಿಯಲ್ ಎಸ್ಟೇಟ್ ಉದ್ಯಮಿ ತನ್ನ ಪತ್ನಿ ಜತೆಗಿದ್ದ ಖಾಸಗಿ ವಿಡಿಯೋ ಕದ್ದು ಆರೋಪಿಗಳು ಅದನ್ನು ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಸಿ ಅವರಿಂದ 5 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರಂತೆ.