ನಗರದ ಹಲವೆಡೆ ಭಾರೀ ಮಳೆ; ಹೆಚ್'ಡಿ. ಕುಮಾರಸ್ವಾಮಿ, ಪರಮೇಶ್ವರ್ ಪದಗ್ರಹಣಕ್ಕೆ ಅಡ್ಡಿ

ಹೆಚ್.ಡಿ.ಕುಮಾರಸ್ವಾಮಿ, ಪರಮೇಶ್ವರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಂಭ್ರಮ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯದಲ್ಲಿ ಮನೆ ಮಾಡಿದ್ದು, ಈ ನಡುವಲ್ಲೇ ನಗರದಲ್ಲಿ ವರುಣನ ಆರ್ಭಟ ಜೋರಾಗಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ, ಪರಮೇಶ್ವರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಂಭ್ರಮ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯದಲ್ಲಿ ಮನೆ ಮಾಡಿದ್ದು, ಈ ನಡುವಲ್ಲೇ ನಗರದಲ್ಲಿ ವರುಣನ ಆರ್ಭಟ ಜೋರಾಗಿದೆ. 
ವಿಧಾನಸೌಧ ಸುತ್ತಮುತ್ತ ಸೇರಿದಂತೆ ಬೆಂಗಳೂರು ನಗರದಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ವಿಧಾನಸೌಧಕ್ಕೆ ಬಳಿ ಜಮಾಯಿಸಿದ್ದ ಸಾವಿರಾರು ಜನರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. 
ಹಲವು ಮಂದಿ ಕುರ್ಚಿಗಳು, ಕಟೌಟ್ ಬ್ಯಾನರ್ ಗಳನ್ನು ಕೊಡೆಗಳನ್ನಾಗಿಸಿಕೊಂಡರೆ, ಇನ್ನು ಕೆಲವರು ಮಳೆಯಿಂದ ತಪ್ಪಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದರು. 
ಕೆಲವರು ಮಳೆಯಲ್ಲಿ ನೆನೆಯುತ್ತಲೇ ಇದ್ದರೆ, ಇನ್ನೂ ಕೆಲವರು ವಿಧಾನಸೌಧದ ಬಳಿಯಿರುವ ಮೆಟ್ರೋ ನಿಲ್ದಾಣದ ಬಳಿ ತೆರಳಿ ಆಶ್ರಯ ಪಡೆದರು. 
ಪದಗ್ರಹಣಕ್ಕೆ ಶಕ್ತಿಸೌಧದ ಆವರಣದಲ್ಲಿ ಮಾಡಲಾಗಿದ್ದ ಭರ್ಜರಿ ವೇದಿಕೆ ಮಳೆಯಿಂದಾಗಿ ತೊಯ್ದು ಹೋಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com