ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳೂ ಕೂಡ ಅಮಾಯಕರ ಮೇಲಿನ ಹಲ್ಲೆಗೆ ಕಾರಣವಾಗುತ್ತಿದೆ. ಕಳ್ಳರು ಬಂದಿದ್ದಾರೆ. ಮಕ್ಕಳನ್ನು ಕೊಂದು ಅಂಗಾಂಗ ಮಾರುತ್ತಾರೆ ಎಚ್ಚರಿಕೆ ಎಂಬ ಗಾಳಿ ಸುದ್ದಿ ರಾಜ್ಯದಾದ್ಯಂತ ಹರಡುತ್ತಿದೆ. ಇದರಿಂದಾಗಿ, ಅಮಾಯಕರ ಮೇಲೆ ಹಲ್ಲೆಗಳು ನಡೆಯುತ್ತಿವೆ. ವದಂತಿಗಳಿಂದ ಹೆದರಿರುವ ಜನ, ಉದ್ದವಾದ ಮೀಸೆ ಹಾಗೂ ಗಡ್ಡ ಬಿಟ್ಟ ಭಿಕ್ಷಕರು, ಮಾನಸಿಕ ಅಸ್ವಸ್ಥರು ಹಾಗೂ ಅಲೆಮಾರಿಗಳನ್ನು ಹಿಡಿದು ಥಳಿಸುತ್ತಿದ್ದಾರೆ. ಇದು ನಿಜಕ್ಕೂ ಆತಂಕಕಾರಿ ಘಟನೆ ಎಂದು ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ.