ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಿನ್ನೆ ಸಂಜೆ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಅನೇಕ ಕಡೆಗಳಲ್ಲಿ ಆಸ್ತಿಪಾಸ್ತಿ ನಷ್ಟ ಉಂಟಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯಗೊಂಡಿತ್ತು.
ಮುರ್ನಾಡುವಿನಲ್ಲಿ 20ಕ್ಕೂ ಹೆಚ್ಚು, ನಾಪೋಕ್ಲುವಿನಲ್ಲಿ ಏಳು ವಿದ್ಯುತ್ ಕಂಬಗಳು ನೆಲಕ್ಕುರಳಿ ಬಿದಿದ್ದು, ವಿರಾಜಪೇಟೆ ಹಾಗೂ ಮೂರ್ನಾಡು ನಡುವೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.
ದೆಚೂರು ಸೇರಿದಂತೆ ಮಡಿಕೇರಿಯ ಅನೇಕ ಕಡೆಗಳಲ್ಲಿ ವಿದ್ಯುತ್ ಇಲ್ಲದೆ ಜನರು ತೊಂದರೆ ಅನುಭವಿಸುವಂತಾಯಿತು.