ಬಂಧಿತ ಆರೋಪಿಗಳು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕೈವಾಡವಿದೆಯೇ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ, 2015ರ ಸೆಪ್ಟಂಬರ್ 9 ರಂದು ನಿವೃತ್ತ ಪ್ರೊಫೆಸರ್ ಕೆ.ಎಸ್ ಭಗವಾನ್ ಅವರಿಗೆ ಬೆದರಿಕೆ ಪತ್ರ ಕಳುಹಿಸಿದ್ದರಲ್ಲಿ ತಮ್ಮ ಪಾತ್ರವಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಎಂ.ಎಂ ಕಲ್ಬುರ್ಗಿ, ಹಾಗೂ ನರೇಂದ್ರ ದಾಬೋಲ್ಕರ್ ಅವರ ನಂತರ ಮುಂದಿನದ್ದು ನಿನ್ನ ಸರದಿ, ದಿನಗಳನ್ನು ಎಣಿಸುತ್ತಿರುವ ಎಂದು ಪತ್ರದಲ್ಲಿ ಬರೆಯಲಾಗಿತ್ತು.