ಮೆಕುನು ಚಂಡಮಾರುತ ಕಾರವಳಿಯಲ್ಲೂ ಸಾಕಷ್ಟು ಅವಾಂತರಗಳಿಗೆ ಕಾರಣವಾಗಿದ್ದು, ಮಂಗಳೂರು, ಉಡುಪಿ, ಕಾರವಾರದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಇನ್ನು ಮಹಾಮಳೆಗೆ ಈವರೆಗೂ ಇಬ್ಬರ ಬಲಿಯಾಗಿದ್ದಾರೆ. ಪಡುಬಿದ್ರಿಯಲ್ಲಿ ಓರ್ವ ಬಾಲಕಿ ನೆರೆ ನೀರಿನಲ್ಲಿ ಕೊಚ್ಚಿ ಹೋಗಿದ್ದು 9 ವರ್ಷ ನಿಧಿ ಆಚಾರ್ಯ ಮೃತದೇಹ ಇಂದು ಪತ್ತೆಯಾಗಿದೆ.