ಮಂಗಳೂರು: ಮಹಾಮಳೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ

ಮೆಕನು ಚೆಂಡಮಾರುತ ಪರಿಣಾಮ ಕರವಾಳಿ ಕರ್ನಾಟಕದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಜಿಲ್ಲಾಡಳಿತ 5 ಲಕ್ಷ ಪರಿಹಾರವನ್ನು ವಿತರಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮಂಗಳೂರು: ಮೆಕನು ಚೆಂಡಮಾರುತ ಪರಿಣಾಮ ಕರವಾಳಿ ಕರ್ನಾಟಕದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಜಿಲ್ಲಾಡಳಿತ 5 ಲಕ್ಷ ಪರಿಹಾರವನ್ನು ವಿತರಿಸಿದೆ. 
ಮಂಗಳೂರಿನ ಉದಯನಗರದ ಮೋಹಿನಿ ಹಾಗೂ ಕೊಡಿಯಾಲಬೈಲ್ ನ ಮುಕ್ತಾಬಾಯಿ ಅವರ ಕುಟುಂಬಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಲಾ 5 ಲಕ್ಷ ರುಪಾಯಿ ಪರಿಹಾರಧನದ ಚೆಕ್ ಅನ್ನು ವಿತರಿಸಿದರು. 
ಮೆಕುನು ಚಂಡಮಾರುತ ಕಾರವಳಿಯಲ್ಲೂ ಸಾಕಷ್ಟು ಅವಾಂತರಗಳಿಗೆ ಕಾರಣವಾಗಿದ್ದು, ಮಂಗಳೂರು, ಉಡುಪಿ, ಕಾರವಾರದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಇನ್ನು ಮಹಾಮಳೆಗೆ ಈವರೆಗೂ ಇಬ್ಬರ ಬಲಿಯಾಗಿದ್ದಾರೆ.  ಪಡುಬಿದ್ರಿಯಲ್ಲಿ ಓರ್ವ ಬಾಲಕಿ ನೆರೆ ನೀರಿನಲ್ಲಿ ಕೊಚ್ಚಿ ಹೋಗಿದ್ದು 9 ವರ್ಷ ನಿಧಿ ಆಚಾರ್ಯ ಮೃತದೇಹ ಇಂದು ಪತ್ತೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com