ಈ ಬಗ್ಗೆ ಟ್ವಿಟರ್ ನಲ್ಲಿ ಬರೆದಿರುವ ಅವರು, ಮಂಗಳೂರಿನಲ್ಲಿ ಭಾರಿಮಳೆಯಿಂದಾಗಿ ಅಲ್ಲಿನ ಜನ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಟ ಅಂಬರೀಶ್ ಅವರ ಜನುಮದಿನದಲ್ಲಿ ಭಾಗಿಯಾಗಿರುವ ಸಿಎಂ ಕುಮಾರಸ್ವಾಮಿ ಅವರಿಗೆ ಈ ಬಗ್ಗೆ ಅರಿವಿದೆಯೋ ಇಲ್ಲವೋ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಮಂಗಳೂರಿಗರು ಮತ ಹಾಕಿಲ್ಲ ಎಂದು ನಿರ್ಲಕ್ಷ್ಯ ತೋರುತ್ತಿದ್ದಿರಾ ಎಂದು ಕಿಡಿಕಾರಿದ್ದಾರೆ. ಅವರ ಸಮಸ್ಯೆಗಳನ್ನೂ ನಿರ್ಲಕ್ಷ್ಯ ಮಾಡಬಾರದು ಎಂದು ಚಕ್ರವರ್ತಿ ಸೂಲಿಬೆಲೆ ಸಿಎಂಗೆ ಸಲಹೆ ನೀಡಿದ್ದಾರೆ.