ಬಿಜೆಪಿ ದೂರಿನ ಹೊರತಾಗಿಯೂ ನಿಗದಿಯಂತೆ ಉಪಚುನಾವಣೆ

ರಾಮನಗರ ಉಪಚುನಾವಣೆಯನ್ನು ಮುಂದೂಡುವಂತೆ ಬಿಜೆಪಿ ಆಗ್ರಹದ ಹೊರತಾಗಿಯೂ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಿಗದಿಯಂತೆ ಶನಿವಾರ ನಡೆಯಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಮನಗರ ಉಪಚುನಾವಣೆಯನ್ನು ಮುಂದೂಡುವಂತೆ ಬಿಜೆಪಿ ಆಗ್ರಹದ ಹೊರತಾಗಿಯೂ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಿಗದಿಯಂತೆ ಶನಿವಾರ  ನಡೆಯಲಿದೆ.

ರಾಮನಗರ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರೂ ಎಲ್ಲಾ ಐದು ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ರಾಮನಗರ ಉಪಚುನಾವಣೆಯನ್ನು ಮುಂದೂಡುವಂತೆ ಬಿಜೆಪಿ ಸಲ್ಲಿಸಿರುವ ಬೇಡಿಕೆಯನ್ನು  ರಾಜ್ಯ ಚುನಾವಣಾಧಿಕಾರಿಗಳು  ಚುನಾವಣಾ ಆಯೋಗಕ್ಕೆ ಸಲ್ಲಿಸಿರುವಂತೆ ಇದಕ್ಕೆ ಕಾನೂನಿಗೆ ಅವಕಾಶವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನೂನಿನಲ್ಲಿ ಇದಕ್ಕೆ ಅವಕಾಶವಿಲ್ಲ, ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗಿದೆ. ಏನು ಮಾಡಬಹುದು ಎಂದು ಚುನಾವಣಾ ಆಯೋಗ ತಿಳಿಸಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ  ಸಂಜೀವ್ ಕುಮಾರ್ ತಿಳಿಸಿದ್ದಾರೆ.

 ರಾಮನಗರ ಉಪಚುನಾವಣೆ ಮುಂದೂಡುವಂತೆ ಒತ್ತಾಯಿಸಿ ಬಿಜೆಪಿ  ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com