ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಬಾಲಾಪರಾಧಿಗಳ ಪುನಶ್ಚೇತನ ಕೇಂದ್ರದಲ್ಲಿದ್ದ ಐದು ಮಂದಿ ಅಪ್ರಾಪ್ತ ಬಾಲಕರು ತಪ್ಪಿಸಿಕೊಂಡಿದ್ದಾರೆ. ಕೇಂದ್ರದಲ್ಲಿನ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ ಬಳಿಕ ಒಟ್ಟು 15 ಬಾಲಕರು ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದ್ದರು. ಇದರಲ್ಲಿ 10 ನಾಲಕರನ್ನು ಸಾರ್ವಜನಿಕರ ಸಹಕಾರದೊಡನೆ ತಕ್ಷಣ ಬಂಧಿಸಲಾಗಿದೆ. ಉಳಿದ ಐವರಿಗಾಗಿ ಹುಡುಕಾಟ ನಡೆದಿದೆ.