ಬೆಂಗಳೂರು: ಕೆಪಿಎಸ್ ಸಿ ಕಚೇರಿಯಲ್ಲಿ ಸಹೋದ್ಯೋಗಿ ಮೇಲೆ ಮಚ್ಚಿನೇಟು!

ಕೆಪಿಎಸ್ ಸಿ ಕೇಂದ್ರ ಕಚೇರಿಯಲ್ಲಿ ಇಂದು ಆಘಾತಕಾರಿ ಘಟನೆಯೊಂದು ನಡೆದಿದೆ. ಹಿರಿಯ ಸಹಾಯಕಿ ವಿಜಯಲಕ್ಷ್ಮಿ ಹಾಗೂ ನೌಕರ ರಾಮು ಎಂಬುವರ ಮೇಲೆ ಮತ್ತೋಬ್ಬ ಹಿರಿಯ ಸಹಾಯಕ ನಟರಾಜ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.
ಕೆಪಿಎಸ್ ಸಿ ಕಚೇರಿ
ಕೆಪಿಎಸ್ ಸಿ ಕಚೇರಿ
Updated on

ಬೆಂಗಳೂರು: ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ ಪಕ್ಕದಲ್ಲಿಯೇ ಇರುವ  ಕೆಪಿಎಸ್ ಸಿ ಕೇಂದ್ರ ಕಚೇರಿಯಲ್ಲಿ ಇಂದು ಆಘಾತಕಾರಿ ಘಟನೆಯೊಂದು ನಡೆದಿದೆ. ಹಿರಿಯ ಸಹಾಯಕಿ ವಿಜಯಲಕ್ಷ್ಮಿ ಹಾಗೂ ನೌಕರ ರಾಮು ಎಂಬುವರ ಮೇಲೆ ಮತ್ತೋಬ್ಬ ಹಿರಿಯ ಸಹಾಯಕ ನಟರಾಜ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ವಿಧಾನಸೌಧ ಪೊಲೀಸರು ನಟರಾಜನನ್ನು  ಬಂಧಿಸಿದ್ದಾರೆ.

ಇತ್ತೀಚಿಗೆ  ಪತ್ನಿಗೆ ವಿಚ್ಚೇದನ ನೀಡಿದ ನಟರಾಜ್  ಜಯಲಕ್ಷ್ಮಿ ಜೊತೆಗೆ ಒಳ್ಳೆಯ ಸಂಬಂಧ ಇಟ್ಟುಕೊಂಡಿದ್ದ. ಇದನ್ನೆ ನೆಪ ಮಾಡಿಕೊಂಡು ಪ್ರೀತಿಯನ್ನು ವ್ಯಕ್ತಪಡಿಸಿ ಮದುವೆಯಾಗುವಂತೆ ಪ್ರಸ್ತಾಪಿಸಿದ್ದಾನೆ. ಜಯಲಕ್ಷ್ಮಿಗೆ ಮದುವೆಯಾಗಿ, ಒಬ್ಬ ಪುತ್ರನಿದ್ದು, ಆತನೊಂದಿಗೆ ಸಂಬಂಧ ಹೊಂದಲು ಆಸಕ್ತಿ ಇಲ್ಲದೆ ಅಂತರ ಕಾಯ್ದುಕೊಂಡಿದ್ದರು .

 ಇದರಿಂದ ಆಕ್ರೋಶಗೊಂಡ ನಟರಾಜ್   ಇಂದು ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ಜಯಲಕ್ಷ್ಮಿ ತಲೆಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಇದನ್ನು ತಡೆಯಲು ಬಂದ ರಾಮು ಎಂಬ ನೌಕರನ ಮೇಲೂ ಹಲ್ಲೆ ನಡೆಸಿದ್ದಾನೆ. ತಕ್ಷಣ ಸ್ಥಳಕ್ಕೆ ಧಾವಿಸಿರುವ ವಿಧಾನಸೌಧ ಪೊಲೀಸರು ಗಾಯಾಗಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಆರೋಪಿ ನಟರಾಜ್ ನನ್ನು ಬಂಧಿಸಿದ್ದಾರೆ.

ಗಾಯಾಳುಗಳು ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com