ಬೆಂಗಳೂರು: ಅಂಬಿಡೆಂಟ್ ಮಾರ್ಕೆಟಿಂಗ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ಧನ ರೆಡ್ಡಿ ಆಪ್ತ ಅಲಿಖಾನ್ ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.
ನಗರದ 61ನೇ ಸೆಷನ್ಸ್ ನ್ಯಾಯಾಲಯ ಅಲಿಖಾನ್ ಗೆ ಷರತ್ತು ಬದ್ದ ಮಧ್ಯಂತರ ಜಾಮೀನು ನೀಡಿದೆ, ಒಬ್ಬರ ಶ್ಯೂರಿಟಿ ಹಾಗೂ 50 ಸಾವಿರ ರು. ಬಾಂಡ್ ಪಡೆದು ಜಾಮೀನು ನೀಡಲಾಗಿದೆ,
ಮಾಜಿ ಸಚಿವ ಜನಾರ್ಧನ ರೆಡ್ಡಿ ಬಂಧನಕ್ಕೆ ಹೈದರಾಬಾದ್ ಗೆ ಸಿಸಿಬಿ ಡಿಸಿಪಿ ಗಿರೀಶ್ ನೇತೃತ್ವದ ತಂಡ ತೆರಳಿದೆ, ಅಲ್ಲಿ ಶೋಧ ನಡೆಸಿರುವ ಸಿಸಿಬಿ ತಂಡ ಸಹಕಾರ ನೀಡುವಂತೆ ತೆಲಂಗಾಣ ಪೊಲೀಸರನ್ನು ಕೋರಿದೆ.
ಮಾರ್ಕೆಟಿಂಗ್ ಹೆಸರಲ್ಲಿ ಹಣ ದ್ವಿಗುಣ ಮಾಡುವುದಾಗಿ ಲಕ್ಷಾಂತರ ಜನರಿಗೆ ಬೆಂಗಳೂರಿನ ಅಂಬಿಡೆಂಟ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ವಂಚನೆ ಮಾಡಿತ್ತು. ಈ ಸಂಬಂಧ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.