ಮಾರ್ಕೆಟಿಂಗ್ ಹೆಸರಲ್ಲಿ ಹಣ ದ್ವಿಗುಣ ಮಾಡುವುದಾಗಿ ಲಕ್ಷಾಂತರ ಜನರಿಗೆ ಬೆಂಗಳೂರಿನ ಅಂಬಿಡೆಂಟ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ವಂಚನೆ ಮಾಡಿತ್ತು. ಈ ಸಂಬಂಧ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬಗ್ಗೆ ತಿಳಿದ ಸಿಎಂ ಕುಮಾರ ಸ್ವಾಮಿ ಕೇಸ್ ಅನ್ನು ಸಿಸಿಬಿ ಪೊಲೀಸರ ಹೆಗಲಿಗೆ ನೀಡಿದ್ದರು, ಈ ಕೇಸ್ ಮುಚ್ಚಿಹಾಕಲು ಕಂಪನಿ ಮಾಲೀಕ ಫರೀದ್ ಹಲವರ ಹಿಂದೆ ಸುತ್ತಿದ್ದರು. ಈ ವೇಳೆ ಫರೀದ್ಗೆ ಬಿಲ್ಡರ್ ಬ್ರಿಜೇಶ್, ರಮೇಶ್ ಕೊಠಾರಿ, ಅಲಿಖಾನ್ ಹಾಗೂ ಜನಾರ್ದನ ರೆಡ್ಡಿ ಸೇರಿ 25 ಕೋಟಿ ಡೀಲ್ಗೆ ಬೇಡಿಕೆಯಿಟ್ಟಿದ್ದರು ಎಂದು ಆರೋಪಿಸಲಾಗಿದೆ