ಗಂಡನ ಕಿರುಕುಳಕ್ಕೆ ಬೇಸತ್ತು ಮಕ್ಕಳೊಂದಿಗೆ ನಾಲೆಗೆ ಹಾರಿ ಹೆಂಡತಿ ಆತ್ಮಹತ್ಯೆ!

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ತನ್ನ ಮಕ್ಕಳೊಂದಿಗೆ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹಾಸನದ ದಿಂಡಗೂರಿನಲ್ಲಿ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಹಾಸನ: ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ತನ್ನ ಮಕ್ಕಳೊಂದಿಗೆ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹಾಸನದ ದಿಂಡಗೂರಿನಲ್ಲಿ ನಡೆದಿದೆ. 
ಮೃತರನ್ನು ರಾಧಾ, ಕಾಂತರಾಜು ಹಾಗೂ ಭರತ್ ಎಂದು ಗುರುತಿಸಲಾಗಿದೆ. ರಾಧಾರ ಗಂಡ ಸಂತೋಷ್ ದುಡ್ಡಿಗಾಗಿ ಪೀಡಿಸುತ್ತಿದ್ದು ಇದರಿಂದ ಬೇಸತ್ತು ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕರಣ ನಂತರ ಸಂತೋಷ್ ಪರಾರಿಯಾಗಿದ್ದು ಆತನ ಪತ್ತೆಯಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಗಂಡನ ಕಿರುಕುಳಕ್ಕೆ ಬೇಸತ್ತು ಹೇಮಾವತಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com