ದುರಾದೃಷ್ಟ ವಶಾತ್ ಇಲ್ಲಿ ಫೋಟೋ ತೆಗೆಸಿಕೊಳ್ಳುವುದೇ ಒಂದು ಟ್ರೆಂಡ್ ಆಗಿದೆ, ಇಲ್ಲಿನ ಕಂಬಗಳು ಒಂದಕ್ಕೊಂದು ಸಮೀಪ ಇವೆ,ಯಾವುದೇ ಆಧಾರವಿಲ್ಲದೆ ನಿಂತಿವೆ,ಜೊತೆಗೆ ಒಂದಕ್ಕೊಂದು ಅಕ್ಕ ಪಕ್ಕ ಇರುವುದರಿಂದ, ಒಂದು ಕಂಬ ಬಿದ್ದರೆ ಎಲ್ಲಾ ಕಂಬಗಳು ಉರುಳಿ ಬೀಳುವ ಸಾಧ್ಯತೆ ಇದೆ. ಜೊತೆಗೆ ಅದರ ಮೇಲೆ ನಿಂತವರ ಪ್ರಾಣಕ್ಕೂ ಸಂಚಕಾರ ಎಂದು ಕಮಲಾಪುರದ ನಿವಾಸಿ ಶರಣಪ್ಪ ಎಂಬುವರು ತಿಳಿಸಿದ್ದಾರೆ.