ಆದರೆ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ "ಸಮ್ಮೇಳನವು ಜನವರಿ 6ರ ಬದಲು 4ಕ್ಕೆ ಪ್ರಾರಂಭಗೊಳ್ಳಲಿದೆ.ಜನವರಿ 8ರಂದು ಸಾರಿಗೆ ಮುಷ್ಕರವಿರಲಿದ್ದು ಕೀಸ್ ಆರ್ ಟಿಸಿ ಸೇರಿ ಬಸ್ ಹಾಗೂ ಸಂಚಾರಿ ವಾಹನ ಸೌಲಭ್ಯಗಳಲ್ಲಿ ವ್ಯತ್ಯಯವಾಗುವ ಸಂಭವವಿದೆ. ಹೀಗಾಗಿ ಸಮ್ಮೇಳನಕ್ಕೆ ಆಗಮಿಸಿದ ಕನ್ನಡಾಭಿಮಾನಿಗಳಿಗೆ ತೊಂದರೆಯಾಗಬಾರದೆನ್ನುವ ಕಾರಣಕ್ಕೆ ಜನವರಿ 4ರಿಂದ ಮೂರು ದಿನಗಳ ಕಾಲ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿದೆ" ಎಂದರು.