ಟಿಪ್ಪು ಜಯಂತಿಗೆ ಗೈರಾಗಿರುವುದಕ್ಕೆ ನಾನಾ ರೀತಿಯ ವ್ಯಾಖ್ಯಾನಗಳನ್ನು ನೀಡಲಾಗುತ್ತಿದೆ. ಅದಲೆಲ್ಲಾ ಸತ್ಯಕ್ಕೆ ದೂರವಾಗಿದ್ದು, ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದೇನೆ. ಹೀಗಾಗಿ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಮೂಢನಂಬಿಕೆ ವಿರೋಧಿಯಾದ ನಾನು ಅಧಿಕಾರ ಕಳೆದುಕೊಳ್ಳುವ ಭೀತಿಯಿಂದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ ಎನ್ನುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.