ನಂಬಲಾರ್ಹ ಪುರಾವೆ, ಸಾಕ್ಷಿಗಳ ಹೇಳಿಕೆಗಳಿಂದ ರೆಡ್ಡಿ ಬಂಧನ -ಅಲೋಕ್ ಕುಮಾರ್ ಸ್ಪಷ್ಟನೆ

ಆಂಬಿಡೆಂಟ್ ಪ್ರಕರಣದಲ್ಲಿ ನಂಬಲಾರ್ಹ ಪುರಾವೆ ಹಾಗೂ ಸಾಕ್ಷಿಗಳ ಹೇಳಿಕೆಗಳ ಆಧಾರದ ಮೇಲೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಅಲೋಕ್ ಕುಮಾರ್
ಅಲೋಕ್ ಕುಮಾರ್
Updated on

ಬೆಂಗಳೂರು:ಆಂಬಿಡೆಂಟ್ ಪ್ರಕರಣದಲ್ಲಿ ನಂಬಲಾರ್ಹ ಪುರಾವೆ ಹಾಗೂ ಸಾಕ್ಷಿಗಳ ಹೇಳಿಕೆಗಳ ಆಧಾರದ ಮೇಲೆ  ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ರೆಡ್ಡಿ ಬಂಧನ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಆಂಬಿಡೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿಗೆ ನೋಟಿಸ್ ನೀಡಲಾಗಿತ್ತು. ಹೀಗಾಗಿ ಅವರು ಶನಿವಾರ ಮಧ್ಯಾಹ್ನ ಸಿಸಿಬಿ ಕಚೇರಿಗೆ ತಮ್ಮ ವಕೀಲರೊಂದಿಗೆ ಆಗಮಿಸಿದ್ದರು. ಈ ವೇಳೆ ತನಿಖಾಧಿಕಾರಿಗಳು ತಡರಾತ್ರಿಯವರೆಗೂ ಸವಿಸ್ತಾರವಾಗಿ ವಿಚಾರಣೆ ನಡೆಸಿದರು ಎಂದು ತಿಳಿಸಿದರು.

ಆಂಬಿಡೆಂಟ್ ಪ್ರಕರಣದಲ್ಲಿ ರೆಡ್ಡಿ 20 ಕೋಟಿ ರೂಪಾಯಿಯನ್ನು ಲಪಟಾಯಿಸಲು ಒಳಸಂಚು ರೂಪಿಸಿದ್ದರ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿದ್ದೇವೆಂದು ತಿಳಿಸಿದರು.

ಬಂಧನದಲ್ಲಿರುವ ರೆಡ್ಡಿಯವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸುತ್ತೇವೆ. ರೆಡ್ಡಿಯ ಜೊತೆ ಅವರ ಆಪ್ತ ಆಲಿಖಾನ್ ನನ್ನು ಸಹ ಬಂಧನ ಮಾಡಿದ್ದೇವೆ ಎಂದು ಹೇಳಿದರು.
ಸಂಪೂರ್ಣ ತನಿಖೆಯ ನಂತರ ಅವರಿಂದ ಹಣವನ್ನು ವಶಕ್ಕೆ ಪಡೆದುಕೊಳ್ಳುತ್ತೇವೆ. ಅಲ್ಲದೇ ಆಂಬಿಡೆಂಟ್ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದವರಿಗೆ ಅದನ್ನು ಮರಳಿಸುತ್ತೇವೆ ಎಂದು ಅಲೋಕ್ ಕುಮಾರ್  ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com