ಧರ್ಮ ನಿಂದನೆ ಪ್ರಕರಣ: ಪತ್ರಕರ್ತ ಸಂತೋಷ್ ತಮ್ಮಯ್ಯಗೆ ಷರತ್ತು ಬದ್ಧ ಜಾಮೀನು

ಟಿಪ್ಪು ಜಯಂತಿ ವಿರೋಧಿಸುವ ನೆಪದಲ್ಲಿ ಧರ್ಮ ನಿಂದನೆ ಆರೋಪದಡಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ಸಂತೋಷ್ ತಮ್ಮಯ್ಯ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಸಂತೋಷ್ ತಮ್ಮಯ್ಯ
ಸಂತೋಷ್ ತಮ್ಮಯ್ಯ
ಪೊನ್ನಂಪೇಟೆ: ಟಿಪ್ಪು ಜಯಂತಿ ವಿರೋಧಿಸುವ ನೆಪದಲ್ಲಿ ಧರ್ಮ ನಿಂದನೆ ಆರೋಪದಡಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ಸಂತೋಷ್ ತಮ್ಮಯ್ಯ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. 
ಪೊನ್ನಂಪೇಟೆಯ ಕೋರ್ಟ್ ಸಂತೋಷ್ ತಮ್ಮಯ್ಯಗೆ ಜಾಮೀನು ಮಂಜೂರು ಮಾಡಿದೆ.  ನವೆಂಬರ್ 5ರಂದು ಗೋಣೆಕೊಪ್ಪದ ಪ್ರಜ್ಞಾ ಕಾವೇರಿ ಸಂಘಟನೆ ಆಯೋಜಿಸಿದ್ದ "ಟಿಪ್ಪು ಕರಾಳ ಮುಖಗಳ ಅನಾವರಣ" ವಿಚಾರ ಸಂಕೀರ್ಣದಲ್ಲಿ ಮಾತನಾಡಿದ ತಮ್ಮಯ್ಯ ಧರ್ಮವೊಂದರ ಕುರಿತು ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನ.12 ರಂದು ಮಧ್ಯರಾತ್ರಿ ಸಂತೋಷ್ ತಮ್ಮಯ್ಯ ಅವರನ್ನು ಬಂಧಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com