ಈ ನಿಟ್ಟಿನಲ್ಲಿ ಪ್ರಸ್ತುತ ಅನಂತಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ಯಾತ್ರೆ ಆರಂಭವಾಗಿದ್ದು, ಪಾರ್ಥಿವ ಶರೀರದ ಅಂತಿಮ ಯಾತ್ರೆ ಎಸ್.ಪಿ.ಸಮಾಜರಸ್ತೆ, ಬಸವನಗುಡಿ ಮೆಡಿಕಲ್ ಸೆಂಟರ್, ಲಾಲ್ಬಾಗ್ ವೆಸ್ಟ್ ಗೇಟ್, ಗೇಟ್, ಆರ್.ವಿ.ರಸ್ತೆ, ಮಿನರ್ವ ಸರ್ಕಲ್, ಶಿವಾಜಿ ವೃತ್ತ, ಎನ್.ಆರ್.ವೃತ್ತ, ಹೈಗ್ರೌಂಡ್ ಜಂಕ್ಷನ್, ಪಿ.ಜಿ.ಹಳ್ಳಿ ಜಂಕ್ಷನ್, ಕಾವೇರಿ ಜಂಕ್ಷನ್, ಬಾಷ್ಯಂ ಸರ್ಕಲ್ ಮಾರಮ್ಮ ಸರ್ಕಲ್, ಸಂಪಿಗೆ ರಸ್ತೆ ಮೂಲಕ ಬಿಜೆಪಿ ಕಚೇರಿಗೆ ತೆಗೆದುಕೊಂಡು ಹೋಗಿ ಅಲ್ಲಿ ದರ್ಶನಕ್ಕೆ ಇಡಲಾಗುತ್ತದೆ. ನಂತರ ಬಿಜೆಪಿ ಕಚೇರಿಯಿಂದ ನ್ಯಾಷನಲ್ ಗ್ರೌಂಡ್ಗೆ ರವಾನಿಸಲಾಗುತ್ತದೆ. ಕಾಡು ಮಲ್ಲೇಶ್ವರ, ಸಂಪಿಗೆ ರಸ್ತೆ, ಸ್ಯಾಂಕಿ ರಸ್ತೆ, ಮಹಾರಾಣಿ ಕಾಲೇಜು ರಸ್ತೆ, ಕೆ.ಆರ್.ಸರ್ಕಲ್, ನೃಪತುಂಗ ರಸ್ತೆ, ಕಾರ್ಪೊರೇಷನ್, ದೇವಾಂಗ ಜಂಕ್ಷನ್,ಪೂರ್ಣಿಮಾ ಜಂಕ್ಷನ್, ಊರ್ವಶಿ ಜಂಕ್ಷನ್ ಮೂಲಕ ನ್ಯಾಷನಲ್ ಗ್ರೌಂಡ್ಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ನಂತರ ನ್ಯಾಷನಲ್ ಗ್ರೌಂಡ್ನಲ್ಲಿ ಸಾರ್ವಜನಿಕರ ದರ್ಶನದ ನಂತರ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತದೆ.