ಅಕ್ಟೋಬರ್ 20 ರವರೆಗೆ ಅನಂತ್ ಸುಮಾರು 20 ದಿನಗಳ ಕಾಲ ಅಲ್ಲಿಯೇ ಇದ್ದರು. ಅವರಿಗೆ ನೀಡಿದ ಚಿಕಿತ್ಸೆಯಿಂದ ಯಾವುದೇ ಪ್ರಯೋಜನವಾಗಲಿಲ್ಲ, ಹೀಗಾಗಿ ಅವರು ವಾಪಸ್ ಭಾರತಕ್ಕೆ ಬರಲು ನಿರ್ಧರಿಸಿದರು, ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಾವು ಚಿಕಿತ್ಸೆ ಮುಂದುವರಿಸಿದೆವು, ಆದರೆ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆಯಾಗಲಿಲ್ಲ, ಕಾಯಿಲೆ ಮತ್ತಷ್ಟು ಉಲ್ಬಣಗೊಂಡಿತು. ಇತ್ತೀಚೆಗೆ ಅಮೆರಿಕ ಬಿಡುಗಡೆ ಮಾಡಿದ ಹೊಸ ಔಷಧಿ ಕೂಡ ಅವರಿಗೆ ನೀಡಲಾಗಿತ್ತು, ಆದರೆ ಪ್ರಯೋಜನವಾಗಲಿಲ್ಲ ಎಂದು ಶಂಕರ ಕ್ಯಾನ್ಸರ್ ಫೌಂಡೇಶನ್ ವೈದ್ಯ ಡಾ. ಬಿ.ಎಸ್ ಶ್ರೀನಾಥ್ ಹೇಳಿದ್ದಾರೆ.