ಬಸವೇಶ್ವರನಗರ ಅತ್ಯಾಚಾರ ಪ್ರಕರಣ: ಕಾಮುಕನಿಗಾಗಿ ಪೊಲೀಸರಿಂದ ತೀವ್ರ ಹುಡುಕಾಟ

ಬಸವೇಶ್ವರನಗರ ಒಂಟಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿರುವ ಅಧಿಕಾರಿಗಳು ಕಾಮುಕನಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಬಸವೇಶ್ವರನಗರ ಒಂಟಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿರುವ ಅಧಿಕಾರಿಗಳು ಕಾಮುಕನಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. 
ಬಸವೇಶ್ವರನಗರದಲ್ಲಿ ಗುರುವಾರ ತಡರಾತ್ರಿ ಮನೆಗೆ ನುಗ್ಗಿರುವ ಕಾಮುಕನೊಬ್ಬ 33 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ. 
ಒಂಟಿ ಮಹಿಳೆಯೆಂದು ಅರಿತ ಆರೋಪಿ ಆಕೆಯನ್ನು ಹಿಂಬಾಲಿಸಿ ಮನೆಯ ಬೆಲ್ ಮಾಡಿದ್ದಾನೆ. ಬಾಗಿಲು ತೆಗೆದ ಕೂಡಲೇ ಮಹಿಳೆಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿ, ಮನೆಯೊಳಗೆ ನುಗ್ಗಿ ಬಾಗಿಲು ಮುಚ್ಚಿದ್ದಾನೆ. ಕೂಗಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಮಹಿಳೆ ಜೊತೆಗೆ ಲೈಂಗಿಕ ಕ್ರಿಯೆಗೆ ಮುಂದಾಗಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾನೆ. 
ಅತ್ಯಾಚಾರ ಮಾಡಿ ಮನೆಯಲ್ಲಿಯೇ ಕೆಲ ಕಾಲ ಉಳಿದ ದುಷ್ಕರ್ಮಿ, ಮೇಲಿಂದ ಮೇಲೆ ಮಹಿಳೆ ಮೇಲೆ ಅತ್ಯಾಚಾರವೆಸಗಿ, ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. 
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಹೆಚ್ಚುವರಿ ಆಯುಕ್ತ ಬಿ.ಕೆ.ಸಿಂಗ್ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕುರಿತು ಕೆಲ ಸುಳಿವುಗಳು ದೊರಕಿವೆ ಎಂದು ಹೇಳಿದ್ದಾರೆ. ಆದರೆ, ಮತ್ತಷ್ಟು ಮಾಹಿತಿ ನೀಡಲು ನಿರಾಕರಿಸಿದ್ದಾರೆ. 
ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳು ಮಾತನಾಡಿ, ಆರೋಪಿ ಕುರಿತು ಮಾಹಿತಿ ಸಂಗ್ರಹಿಸಲು ಸ್ಥಳೀಯರ ಸಹಾಯ ಕೇಳಲಾಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳಿಂದ ಯಾವುದೇ ಸುಳಿವುಗಳು ದೊರಕಿಲ್ಲ ಎಂದು ಹೇಳಿದ್ದಾರೆ. 
ಘಟನೆ ಬಳಿಕ ತನಿಖೆ ನಡೆಸುತ್ತಿರುವ ಪೊಲೀಸರೇ ಸ್ಥಳೀಯ ಮನೆ ಬಾಗಿಲು ಬಡಿದರೂ ಬಾಗಿಲು ತೆಗೆಯಲು ಸ್ಥಳೀಯರು ಹೆದರುತ್ತಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com