ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ: ಇಂದು ಕೊಡಗು ಬಂದ್

ಕೊಡಗು ಜಿಲ್ಲೆ ಗೋಣಿಕೊಪ್ಪಲಿನಲ್ಲಿ ಕಳೆದ ವಾರ ನಡೆದ ಟಿಪ್ಪು ಕರಾಳ ಮುಖಗಳ ಅನಾವರಣ ಎಂಬ ಕಾರ್ಯಕ್ರಮದಲ್ಲಿ ಟಿಪ್ಪು ಹಾಗೂ ಪ್ರವಾದಿಯವರ ಬಗ್ಗೆ ಅವಹೇಶನಕಾರಿ ಭಾಷಣ ಮಾಡಿದ ಆರೋಪದಡಿ ಪತ್ರಕರ್ತ ಸಂತೋಷ್ ತಮ್ಮಯ್ಯ...
ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ
ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ
ಮಧುಗಿರಿ: ಕೊಡಗು ಜಿಲ್ಲೆ ಗೋಣಿಕೊಪ್ಪಲಿನಲ್ಲಿ ಕಳೆದ ವಾರ ನಡೆದ ಟಿಪ್ಪು ಕರಾಳ ಮುಖಗಳ ಅನಾವರಣ ಎಂಬ ಕಾರ್ಯಕ್ರಮದಲ್ಲಿ ಟಿಪ್ಪು ಹಾಗೂ ಪ್ರವಾದಿಯವರ ಬಗ್ಗೆ ಅವಹೇಶನಕಾರಿ ಭಾಷಣ ಮಾಡಿದ ಆರೋಪದಡಿ ಪತ್ರಕರ್ತ ಸಂತೋಷ್ ತಮ್ಮಯ್ಯ ಅವರನ್ನು ಬಂಧಿಸಿದ ಪೊಲೀಸರ ಕ್ರಮಕ್ಕೆ ಹಿಂದೂಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. 
ಪತ್ರಕರ್ತನ ಬಂಧನ ಖಂಡಿಸಿ ಗೋಣಿಕೊಪ್ಪಲಿನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಗಿದ್ದು, ಇಂದೂ ಕೂಡ ಮಧ್ಯಾಹ್ನ 1 ಗಂಟೆ ಕಾಲ ಸಾಂಕೇತಿಕ ಕೊಡಗು ಬಂದ್ ಆಚರಿಸಲು ಕರೆ ನೀಡಲಾಗಿದೆ. 
ಸಂತೋಷ್ ತಮ್ಮಯ್ಯ ಅವರ ಬಂಧನ ಖಂಡಿಸಿ ಹಿಂದೂಪರ ಸಂಘಟನೆಗಳು ನಿನ್ನೆ ಗೋಣಿಕೊಪ್ಪಲಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದವು. ಬಸ್ ನಿಲ್ದಾಣದ ಎದುರು ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. 
ಹಿಂದೂಪರ ಸಂಘಟನೆಗಳ ಕರೆಯಂತೆ ನಿನ್ನೆ ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಿ ವಿರೋಧ ವ್ಯಕ್ತಪಡಿಸಲಾಯಿತು. ಸಂತೋಷ್ ತಮ್ಮಯ್ಯ ಅವರ ಬಂಧನ ಹಿಂದೂಪರ ಸಂಘಟನೆಗಳ ವಿರುದ್ಧ ನಡೆಯುತ್ತಿರುವ ಪಿತೂರಿಯಾಗಿದ್ದು, ಅವರಿಗೆ ನ್ಯಾಯ ಒದಗಿಸಬೇಕೆಂದು ಇಂದು ಮಧ್ಯಾಹ್ನವೂ ಸೀಮಿತ ಅವಧಿಗೆ ಕೊಡಗು ಬಂದ್'ಗೆ ಹಿಂದೂ ಸುರಕ್ಷಾ ವೇದಿಕೆ ಕರೆ ನೀಡಿದೆ. ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಪಟ್ಟಣಗಳಲ್ಲಿ ಅಂಗಡಿ-ಮುಂಗಟ್ಟು ಮುಚ್ಚಿ ಬೆಂಬಲ ನೀಡುವಂತೆ ವೇದಿಕೆ ಮನವಿ ಮಾಡಿಕೊಂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com