ಹಿಂದೂಪರ ಸಂಘಟನೆಗಳ ಕರೆಯಂತೆ ನಿನ್ನೆ ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಿ ವಿರೋಧ ವ್ಯಕ್ತಪಡಿಸಲಾಯಿತು. ಸಂತೋಷ್ ತಮ್ಮಯ್ಯ ಅವರ ಬಂಧನ ಹಿಂದೂಪರ ಸಂಘಟನೆಗಳ ವಿರುದ್ಧ ನಡೆಯುತ್ತಿರುವ ಪಿತೂರಿಯಾಗಿದ್ದು, ಅವರಿಗೆ ನ್ಯಾಯ ಒದಗಿಸಬೇಕೆಂದು ಇಂದು ಮಧ್ಯಾಹ್ನವೂ ಸೀಮಿತ ಅವಧಿಗೆ ಕೊಡಗು ಬಂದ್'ಗೆ ಹಿಂದೂ ಸುರಕ್ಷಾ ವೇದಿಕೆ ಕರೆ ನೀಡಿದೆ. ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಪಟ್ಟಣಗಳಲ್ಲಿ ಅಂಗಡಿ-ಮುಂಗಟ್ಟು ಮುಚ್ಚಿ ಬೆಂಬಲ ನೀಡುವಂತೆ ವೇದಿಕೆ ಮನವಿ ಮಾಡಿಕೊಂಡಿದೆ.