ರಸ್ತೆ ಅಗಲೀಕರಣಕ್ಕೆ ಈಗಾಗಲೇ ಹಲವು ಸಿದ್ಧತೆಗಳನ್ನು ನಡೆಸಿರುವ ಸರ್ಕಾರ, ನಿರ್ಮಾಣ ಕಾರ್ಯಗಳು ಸಂಪೂರ್ಣವಾಗಿ ಡಿಸೆಂಬರ್ ತಿಂಗಳಿನಲ್ಲಿ ಆರಂಭಗೊಳ್ಳಲಿದೆ. ಈಗಾಗಲೇ ರಸ್ತೆಗಳಲ್ಲಿದ್ದ ಡಾಬಾ, ಅಂಗಡಿಗಳು ಹಾಗೂ ಇತರೆ ವಾಣಿಜ್ಯ ಕಟ್ಟಡಗಳನ್ನು ಸ್ಥಳಂತರ ಮಾಡುವಂತೆ ಮಾಲೀಕರಿಗೆ ಸೂಚಿಸಿದೆ. ಯೋಜನೆಗೆ ಅಗತ್ಯವಿರುವ ಶೇ.80ರಷ್ಟು ಭೂಮಿಯನ್ನು ಈಗಾಗಲೇ ಸರ್ಕಾರ ವಶಕ್ಕೆ ಪಡೆದುಕೊಂಡಿದೆ. ನಿರ್ಮಾಣ ಕಾರ್ಯ ಬೆಂಗಳೂರು-ನೀಡಘಟ್ಟ ಮತ್ತು ಮೈಸೂರು-ನೀಡಘಟ್ಟ ಎರಡು ಹಂತಗಳಲ್ಲಿ ನಡೆಯಲಿದೆ.