ಟಿಪ್ಪು ಜಯಂತಿ ಆಚರಣೆ ವಿಚಾರ: ಸರ್ಕಾರದ ನಿಲುವಿನಲ್ಲಿ ಬದಲಾವಣೆಯಿಲ್ಲ; ಸಿಎಂ

ಟಿಪ್ಪು ಜಯಂತಿ ಆಚರಣೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಹೇಳಿದ್ದಾರೆ.
ಕುಮಾರ ಸ್ವಾಮಿ
ಕುಮಾರ ಸ್ವಾಮಿ
Updated on
ಬೆಂಗಳೂರು:  ಟಿಪ್ಪು ಜಯಂತಿ ಆಚರಣೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಸಿಎಂ ಕುಮಾರಸ್ವಾಮಿ, ಟಿಪ್ಪು ಜಯಂತಿ ವಿಷಯವನ್ನು ರಾಜಕೀಯಕರಣಗೊಳಿಸಲು ಯತ್ನಿಸುತ್ತಿರುವುದಕ್ಕೆ ಬೇಸರ ವ್ಯಕ್ತ ಪಡಿಸಿದರು. ನವೆಂಬರ್ 10 ರಂದು ನಡೆದ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಸಿಎಂ ಮತ್ತು ಡಿಸಿಎಂ ಗೈರಾಗಿದ್ದರು.
ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಗೈರಾಗಿದ್ದಕ್ಕೆ ವಿವರಣೆ ನೀಡಿದ ಅವರು, ಎಲ್ಲಾ ಕಾರ್ಯಕ್ರಮಗಳಿಗೂ ಹಾಜರಾಗಬೇಕೆಂಬ ಅವಶ್ಯಕತೆಯಿಲ್ಲ, ಸರ್ಕಾರದ ಪ್ರತಿನಿಧಿಗಳ ಸಮ್ಮುಖದಲ್ಲಿ ಅಧಿಕೃತ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಹೇಳಿದ್ದಾರೆ.
ಮಡಿಕೇರಿಯಲ್ಲಿ  ಟಿಪ್ಪು ಜಯಂತಿ ವಿರೋಧಿಸಿ ನಡೆದ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಸ್ಥಳೀಯ ಕನ್ನಡ ಪತ್ರಿಕೆ ಸಂಪಾದಕರ ಮೇಲೆ ಕೇಸ್ ದಾಖಲಿಸಲಾಗಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ನನಗೆ ಪ್ರಕರಣದ ಬಗ್ಗೆ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com