ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ನಡೆಸಿದ್ದು, ಮೃತ ಚಾಲಕನನ್ನು ಕೃಷ್ಣಮೂರ್ತಿ ಗುರುತಿಸಿದ್ದಾರೆ. ಕೃಷ್ಣಮೂರ್ತಿ ಭದ್ರಾವತಿಯ ಮಾವಿನಕಟ್ಟೆ ಗ್ರಾಮದವರು ಎನ್ನಲಾಗಿದ್ದು, ಬೆಳಗ್ಗೆ ಸುಮಾರು ನಾಲ್ಕೂವರೆ ಗಂಟೆಗೆ ಘಟನೆ ನಡೆದಿದೆ. ಇಂಡೇನ್ ಗ್ಯಾಸ್ ಕಂಪನಿಗೆ ಸೇರಿದ ಲಾರಿ ಇದಾಗಿದ್ದು, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಫೋಟದಿಂದ ರಸ್ತೆಯಲ್ಲಿ ಸಂಚಾರ ದಟ್ಟಣೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.